Vande Bharat Express: ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ರೈಲಿಗೆ ಬೇಡಿಕೆ ಹೆಚ್ಚಾಗಲು ಕಾರಣ ಏನು?-ಇಲ್ಲಿದೆ ಮಾಹಿತಿ
Vande Bharat Express Train: ಹುಬ್ಬಳ್ಳಿ-ಧಾರವಾಡ-ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚಾರ ಆರಂಭವಾಗಿ ನಾಳೆಗೆ ಅಂದರೆ ಜೂನ್ 27, 2024ಕ್ಕೆ ಒಂದು ವರ್ಷ ಆಗಲಿದೆ. ಹಾಗಾದರೆ ಈ ರೈಲಿಗೆ ಪ್ರತಿಕ್ರಿಯೆಗಳು ಹೇಗಿವೆ ಹಾಗೂ ಇಲ್ಲಿವರೆಗೂ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆಯ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು- ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಸಂಚಾರ ಆರಂಭಗೊಂಡು ನಾಳೆಗೆ ಒಂದು ವರ್ಷ ಆಗಲಿದ್ದು, ಈ ರೈಲಿಗೆ ಬೇಡಿಕೆ ಹೆಚ್ಚಾಗಿದೆ. ಹಾಗಾದರೆ ಇದಕ್ಕೆ ಪ್ರಮುಖ ಕಾರಣ ಏನು ಎಂದು ಇಲ್ಲಿ ತಿಳಿಯಿರಿ.

ಈ ಮಾರ್ಗದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಒಂದು ವರ್ಷದಿಂದ ನಿಧಾನಗತಿಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹುಬ್ಬಳ್ಳಿ-ಧಾರವಾಡದಿಂದಲೇ ಶೇಕಡಾ 85ರಷ್ಟು ಬುಕ್ಕಿಂಗ್ ಆಗುತ್ತಿದ್ದು, ವಿಶೇಷವಾಗಿ ರಜೆ ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಶೇಕಡ 110ಕ್ಕೂ ಹೆಚ್ಚಿರುತ್ತದೆ.
ಜೂನ್ 27ರಂದು ತನ್ನ ಮೊದಲ ವಾರ್ಷಿಕೋತ್ಸವ ಆಚರಿಸಿಕೊಳ್ಳಲಿರುವ ಈ ಮಾರ್ಗದ ವಂದೇ ಭಾರತ್ ರೈಲು, ವ್ಯಾಪಾರಸ್ಥರು ಮತ್ತು ನೌಕರರ ಪ್ರಯಾಣಿಕರಿಗೆ ನೆಚ್ಚಿನದಾಗಿದೆ ಎಂದು ನೈಋುತ್ಯ ರೈಲ್ವೆ ಸಾರ್ವಜನಿಕ ಮುಖ್ಯ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ಹೇಳಿದ್ದಾರೆ.
ಆರಾಮದಾಯಕ ಮತ್ತು ಸುರಕ್ಷಿತ ಐಷಾರಾಮಿ ಪ್ರಯಾಣ ಸೇವೆ ಒದಗಿಸುತ್ತಿರುವ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆಯ ಬಗ್ಗೆ ಕೆಲವರು, ಹುಬ್ಬಳ್ಳಿ, ಧಾರವಾಡದಿಂದ ತುಂಬ ಕಡಿಮೆ ಪ್ರಯಾಣಿಕರು ಇರುತ್ತಿದ್ದು, ದಾವಣಗೆರೆಯಿಂದ ಹೆಚ್ಚಿನ ಜನರು ಸಂಚಾರ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಇದು ಸುಳ್ಳು. ಎಲ್ಲಿಂದ ಎಷ್ಟು ಜನರು ಸೀಟು ಕಾಯ್ದಿರಿಸುತ್ತಾರೆ ಎಂಬುದು ನಮ್ಮಲ್ಲಿ ದಾಖಲೆ ಹೇಳುತ್ತವೆ ಎಂದು ಸಿಪಿಆರ್ಒ ಡಾ.ಮಂಜುನಾಥ ಹೇಳಿದ್ದಾರೆ.
ರೈಲು ಸಂಖ್ಯೆ 20662ರಲ್ಲಿ ಎಕ್ಸಿಕ್ಯುಟಿವ್ ಕ್ಲಾಸ್ ವಿಭಾಗದಲ್ಲಿ ಕೇವಲ ಶೇಕಡ 15.01ರಷ್ಟು ಸೀಟುಗಳು ದಾವಣಗೆರೆಯಿಂದ ಬುಕ್ ಆಗಿದ್ದರೆ, ಹುಬ್ಬಳ್ಳಿಯಿಂದ ಶೇಕಡ 53.57 ಮತ್ತು ಧಾರವಾಡದಿಂದ ಶೇಕಡ 31.4 ಬುಕ್ ಆಗಿದೆ. ಆದರೆ ಹುಬ್ಬಳ್ಳಿ -ಧಾರವಾಡದಿಂದ ಬುಕ್ಕಿಂಗ್ ಶೇಕಡ 84.97ರಷ್ಟು ಆಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಿಂದ ಧಾರವಾಡದ ಕಡೆಗೆ ಬರುವ ರೈಲು(20661) ದಾವಣಗೆರೆಯಿಂದ ಶೇಕಡ 15.67 ಮತ್ತು ಹುಬ್ಬಳ್ಳಿ ಮತ್ತು ಧಾರವಾಡದಿಂದ ಕ್ರಮವಾಗಿ ಶೇಕಡ 58.09 ಮತ್ತು ಶೇಕಡ 26.2 ಬುಕಿಂಗ್ ಪಡೆಯುತ್ತದೆ. ಹುಬ್ಬಳ್ಳಿ-ಧಾರವಾಡದಿಂದ ಬುಕ್ಕಿಂಗ್ ಶೇಕಡ 84.31ರಷ್ಟು, ಚೇರ್ ಕಾರ್ನಲ್ಲಿ ಕೇವಲ ಶೇಕಡ 25.56ರಷ್ಟು ಸೀಟುಗಳು ದಾವಣಗೆರೆಯಿಂದ ಬುಕ್ ಆಗಿದ್ದರೆ, ಹುಬ್ಬಳ್ಳಿಯಿಂದ ಶೇಕಡ 43.16 ಮತ್ತು ಧಾರವಾಡದಿಂದ 31.24ರಷ್ಟು ಜನರು ಟಿಕೆಟ್ ಕಾಯ್ದಿರಿಸಿದ್ದರು ಎಂದು ತಿಳಿಸಿದ್ದಾರೆ.
ಕಳೆದ ವರ್ಷದ ಜನವರಿಯಿಂದ ಜೂನ್ 24ರವರೆಗಿನ 6 ತಿಂಗಳ ಅವಧಿಯಲ್ಲಿ ಬೆಂಗಳೂರಿನಿಂದ ಧಾರವಾಡವರೆಗೆ ಸರಾಸರಿ 79 ಜನ ನಿತ್ಯ ಪ್ರಯಾಣಿಸಿದ್ದಾರೆ. ಅದೇ ರೀತಿ ಧಾರವಾಡದಿಂದ ಬೆಂಗಳೂರಿಗೆ ಶೇಕಡ 85.35ರಷ್ಟು ಜನರು ಪ್ರಯಾಣ ಮಾಡಿಸಿದ್ದಾರೆ. ಇದೇ ರೀತಿ ಬೆಂಗಳೂರಿನಿಂದ ಧಾರವಾಡ ಮಧ್ಯೆ ಶೇಕಡ 79ರಷ್ಟು ಜನರು ಪ್ರಯಾಣ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರು-ಧಾರವಾಡ-ಬೆಂಗಳೂರು (20661/20662) ವಂದೇ ಭಾರತ್ ರೈಲು ಮಂಗಳವಾರ ಹೊರತುಪಡಿಸಿ ನಿತ್ಯವೂ ಬೆಂಗಳೂರಿನಿಂದ ಬೆಳಗ್ಗೆ 5:45ಕ್ಕೆ ಹೊರಟು ಧಾರವಾಡಕ್ಕೆ 12:10ಕ್ಕೆ ತಲುಪಲಿದೆ. ಇದೇ ರೈಲು (20662) ಮಧ್ಯಾಹ್ನ 1:15ಕ್ಕೆ ಧಾರವಾಡದಿಂದ ಹೊರಟು ಬೆಂಗಳೂರಿಗೆ ಸಂಜೆ 7:45ಕ್ಕೆ ತಲುಪಲಿದೆ. ಯಶವಂತಪುರ, ದಾವಣಗೆರೆ, ಹುಬ್ಬಳ್ಳಿಯಲ್ಲಿ ಮಾತ್ರ ನಿಲುಗಡೆಯಾಗಲಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications