ಚಿಕ್ಕಬಳ್ಳಾಪುರ-ಪುಟ್ಟಪರ್ತಿ ರೈಲ್ವೆ ಯೋಜನೆ ಪೂರ್ಣ ಯಾವಾಗ?, ಬಾಗೇಪಲ್ಲಿ ಭಾಗದ ಜನರ ಪ್ರಶ್ನೆ

ಚಿಕ್ಕಬಳ್ಳಾಪುರ, ಸೆಪ್ಟೆಂಬರ್‌, 26: ಚಿಕ್ಕಬಳ್ಳಾಪುರದಿಂದ ಗುಡಿಬಂಡೆ ತಾಲೂಕಿನ ಮೂಲಕ ಬಾಗೇಪಲ್ಲಿ ಮಾರ್ಗವಾಗಿ ಆಂಧ್ರಪ್ರದೇಶದ ಗೋರಂಟ್ಲ-ಪುಟ್ಟಪರ್ತಿಗೆ ಸಂಪರ್ಕ ಕಲ್ಪಿಸುವ ರೈಲು ಸಂಚಾರ ಕಾಮಗಾರಿ ಹಲವು ವರ್ಷಗಳಿಂದ ಸರ್ವೇ ಹಂತದಲ್ಲಿಯೇ ಕುಂಟುತ್ತಾ ಸಾಗಿದ್ದು, ಈ ಯೋಜನೆಯನ್ನು ಕೂಡಲೇ ಆರಂಭಿಸಬೇಕೆಂಬ ಕೂಗು ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ರಾಜ್ಯದ ಗಡಿ ಭಾಗದ ರೈತರು, ಜನ ಸಾಮಾನ್ಯರು ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

2009ರಲ್ಲಿ ಯಶವಂತಪುರ- ಸತ್ಯಸಾಯಿ ಎಕ್ಸ್‌ಪ್ರೆಸ್‌ ರೈಲಿನ ಮಾರ್ಗ ಯೋಜನೆ ಮಾಡಲು ಅಂದಿನ ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಡಾ.ಎಂ.ವೀರಪ್ಪ ಮೊಯಿಲಿ, ಮಾಜಿ ಶಾಸಕ ಎನ್.ಸಂಪಂಗಿ ಅವರು ಅಂದಿನ ರೈಲ್ವೆ ಇಲಾಖೆಯ ಸಚಿವ ಮಮತಾ ಬ್ಯಾನರ್ಜಿ ಅವರ ಮೇಲೆ ಒತ್ತಡ ಹಾಕಿದ್ದರು. ಅವರು ಮಂಡಿಸಿದ ಬಜೆಟ್‌ನಲ್ಲಿ ಈ ರೈಲು ಯೋಜನೆ ಕಾಮಗಾರಿಗೆ 7480 ಕೋಟಿ ರೂಪಾಯಿ ಮೀಸಲಿಟ್ಟು, ಅನುದಾನ ಬಿಡುಗಡೆ ಮಾಡಿದ್ದರು.

When will be Chikkaballapur-Puttaparthi railway project completed?: Bagepalli people Question

ಇದರಿಂದಾಗಿ ಚಿಕ್ಕಬಳ್ಳಾಪುರದಿಂದ ಪುಟ್ಟಪರ್ತಿವರೆಗೆ ರೈಲ್ವೆ ಕಾಮಗಾರಿಗೆ ಸಮೀಕ್ಷೆ ಕೈಗೊಳ್ಳಲಾಗಿದೆ. ಆದರೆ, ರೈಲು ಮಾರ್ಗ ಹೋಗುವ ಜಾಗದ ರೈತರಿಗೆ ಪರಿಹಾರ ಕಲ್ಪಿಸಲು ಅನುದಾನದ ಕೊರತೆ ಇದೆ. ಅಂದಿನ ಸರ್ಕಾರ ಅರ್ಹ ರೈತ ಫಲಾನುಭವಿಗೆ ಒಂದು ಹೆಕ್ಟೇರ್‌ ಜಮೀನಿಗೆ 16 ಲಕ್ಷ ಹಾಗೂ ಕುಟುಂಬದಲ್ಲಿನ ಒಬ್ಬರಿಗೆ ಉದ್ಯೋಗ ಕಲ್ಪಿಸಲು ಒಪ್ಪಿತ್ತು. ಆದರೆ, ಆ ನಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರ ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದ್ದರಿಂದಾಗಿ ಈ ಯೋಜನೆ ಕಾಮಗಾರಿಯು ಈಗಲೂ ನನೆಗುದಿಗೆ ಬಿದ್ದಿದೆ.

ಸಾವಿರಾರು ಭಕ್ತರನ್ನು ಹೊಂದಿರುವ ಸತ್ಯಸಾಯಿಬಾಬಾ ಅಶ್ರಮಕ್ಕೆ ದೇಶ, ವಿದೇಶಗಳಿಂದ ಬರುತ್ತಾರೆ. ಬೆಂಗಳೂರಿನಿಂದ 200ಕಿಲೋ ಮೀಟರ್‌ ದೂರವಿರುವ ಪುಟ್ಟಪರ್ತಿಗೆ ಸಾರಿಗೆ ಹಾಗೂ ರೈಲು ಸೇವೆಗಳಿವೆ. ಆದರೆ, ಬಾಗೇಪಲ್ಲಿಯಿಂದ ಗೋರಂಟ್ಲಿ, ಪುಟ್ಟಪರ್ತಿವರೆಗೆ ರೈಲು ಮಾರ್ಗವಿಲ್ಲ. ಇದರಿಂದಾಗಿ ಈ ಭಾಗಗಳಿಂದ ಸಾಯಿಬಾಬಾ ಭಕ್ತರಿಗೆ ಸಮಸ್ಯೆಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಪ್ರಾಂತ ಕೃಷಿಕೂಲಿಕಾರ ಸಂಘಟನೆಯ ರಾಜ್ಯ ಅಧ್ಯಕ್ಷ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ, 'ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಜನಪ್ರತಿನಿದಿಗಳ ನಿರ್ಲಕ್ಷದಿಂದ ಚಿಕ್ಕಬಳ್ಳಾಪುರ ಹಾಗೂ ಪುಟ್ಟಪರ್ತಿ ರೈಲು ಮಾರ್ಗದ ಯೋಜನೆ ನನೆಗುದಿಗೆ ಬಿದ್ದಿದೆ. ಆಂಧ್ರಪ್ರದೇಶದ ರೈಲ್ವೆ ಅಧಿಕಾರಿಗಳು ಪುಟ್ಟಪರ್ತಿಯಿಂದ ಬಾಗೇಪಲ್ಲಿ ಮಾರ್ಗವಾಗಿ ಚಿಕ್ಕಬಳ್ಳಾಪುರದವರಿಗೆ ರೈಲು ಯೋಜನೆಗೆ ಸಮೀಕ್ಷೆ ನಡೆಸಿ, ಕಾಮಗಾರಿಯ ವೆಚ್ಚದ ಹಣ ಬಿಡುಗಡೆಗೆ ಮನವಿ ಮಾಡಿದ್ದಾರೆ. ಆರು ತಿಂಗಳ ಒಳಗೆ ಚಿಕ್ಕಬಳ್ಳಾಪುರದಿಂದ ಪುಟ್ಟಪರ್ತಿಗೆ ರೈಲು ಸಂಚಾರ ಕಾಮಗಾರಿ ಪೂರ್ಣಗೊಳಿಸಬೇಕು' ಎಂದು ಒತ್ತಾಯಿಸಿದ್ದಾರೆ.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಚಿಕ್ಕಬಳ್ಳಾಪುರದಿಂದ ಬಾಗೇಪಲ್ಲಿ ಮಾರ್ಗವಾಗಿ ಗೋರಂಟ್ಲಿ, ಪುಟ್ಟಪರ್ತಿ ಕಡೆಗೆ ಹೋಗುವ ಈ ರೈಲು ಯೋಜನೆ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ರೈಲ್ವೆ ಅಧಿಕಾರಿಗಳು ಸಮೀಕ್ಷೆ ನಡೆಸಿ ರೈಲ್ವೆ ಮಂಡಳಿಗೆ ಸಲ್ಲಿಸಿದ್ದಾರೆ. ಈ ಮಾರ್ಗದಿಂದ ಅಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ 12 ಗ್ರಾಮಗಳ ಜನರ ಪ್ರಯಾಣಕ್ಕೆ ಅನುಕೂಲವಾಗಲಿದೆ. ಅಲ್ಲದೆ ಅಂಧ್ರಪ್ರದೇಶ, ಕರ್ನಾಟಕ ರಾಜ್ಯಗಳಿಗೆ ಸಂಪರ್ಕ ಸಿಗಲಿದೆ. ಒಂದು ಕಿ.ಮೀ. ರೈಲು ಮಾರ್ಗ ನಿರ್ಮಾಣಕ್ಕೆ 112 ಕೋಟಿಗಳಷ್ಟು ವೆಚ್ಚವಾಗಬಹುದು ಎಂದು ಅಂದಾಜು ವೆಚ್ಚ ಸಲ್ಲಿಸಲಾಗಿದೆ.

ರೈಲು ಯೋಜನೆಯಲ್ಲಿ ವಿದ್ಯುತ್‌ ಕೆಲಸಗಳಿಗೆ ಸಹ ಅನುಕೂಲ ಆಗಿದೆ. ಈ ಮಾರ್ಗದ ರೈಲಿನ ಯೋಜನೆಯಿಂದ ಪುಟ್ಟಪರ್ತಿ, ಗುಂತಕಲ್ಲು, ತಿರುಪತಿ, ಹೈದರಾಬಾದ್ ಕಡೆಗೆ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲ ಆಗಲಿದೆ ಎಂದು ರೈಲ್ವೆ ಮಂಡಳಿಗೆ ಅಧಿಕಾರಿಗಳು ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ.

ಜಿಲ್ಲೆಯ ಬಾಗೇಪಲ್ಲಿ ತಾಲೂಕು ಮತ್ತು ಆಂಧ್ರಪ್ರದೇಶದ ಪುಟ್ಟಪರ್ತಿ, ಮುದಿಗುಬ್ಬ, ಗುಂತಕಲ್ಲು ಸೇರಿದಂತೆ ವಿವಿಧ ಕಡೆಗಳಲ್ಲಿ ರೈತರು ಹೆಚ್ಚಾಗಿ ಕೃಷಿ ಹಾಗೂ ತರಕಾರಿ ಬೆಳೆಗಳನ್ನು ಬೆಳೆಯುತ್ತಾರೆ. ಆದರೆ, ಬಾಗೇಪಲ್ಲಿ, ಗುಡಿಬಂಡೆಯಿಂದ ರೈಲ್ವೆ ಮಾರ್ಗ ಇಲ್ಲದಿರುವ ಕಾರಣ ಈ ಭಾಗದ ರೈತರು ತಾವು ಬೆಳೆದ ತರಕಾರಿಗಳನ್ನು ಬೆಂಗಳೂರು ಮತ್ತು ಪುಟ್ಟಪರ್ತಿಗೆ ಸೇರಿದಂತೆ ವಿವಿಧ ಕಡೆಗಳಿಗೆ ಸಾಗಿಸಲು ಆಗುತ್ತಿಲ್ಲ ಎಂಬುದು ರೈತರ ಅಳಲು.

ಕರ್ನಾಟಕದ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ರೈತರು ಮತ್ತು ವ್ಯಾಪಾರಸ್ಥರು ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಬೆಂಗಳೂರು ಕಡೆಗಳಿಗೆ ವಿವಿಧ ವ್ಯಾಪಾರ ವಹಿವಾಟು ನಡೆಸಲು ಸದಾ ಬರುತ್ತಾರೆ. ತರಕಾರಿಗಳು ಹಾಗೂ ದವಸ, ಧಾನ್ಯಗಳನ್ನು ಖರೀದಿ ಮಾಡಿ, ಸಾಗಿಸಲು ಹರಸಾಹಸ ಪಡುವಂತಾಗಿದೆ. ಹೀಗಾಗಿ ರೈಲು ಸಂಚಾರ ಯೋಜನೆ ಶೀಘ್ರವೇ ಪೂರ್ಣಗೊಳ್ಳಬೇಕು ಎಂಬುದು ಈ ಭಾಗದ ರೈತರು ಮತ್ತು ವ್ಯಾಪಾರಸ್ತರ ಕೂಗು ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+