Vande Bharat; ಬೆಳಗಾವಿಗೆ ವಂದೇ ಭಾರತ್ ವಿಳಂಬ ಏಕೆ, ಇಲಾಖೆ ಮಾಹಿತಿ
ಬೆಳಗಾವಿ, ಜನವರಿ 18: ಭಾರತೀಯ ರೈಲ್ವೆ ಜನಪ್ರತಿನಿಧಿಗಳ, ಪ್ರಯಾಣಿಕರ ಬೇಡಿಕೆಯಂತೆ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಲು ಒಪ್ಪಿಗೆ ಕೊಟ್ಟಿದೆ. ಪ್ರಾಯೋಗಿಕ ಸಂಚಾರವೂ ಮುಗಿದಿದೆ. ಆದರೆ ರೈಲು ಓಡುತ್ತಿಲ್ಲ.
ಕೆಎಸ್ಆರ್ ಬೆಂಗಳೂರು-ಧಾರವಾಡ ನಡುವೆ ಸಂಚಾರ ನಡೆಸುವ ರೈಲು ನಂಬರ್ 20661/ 20662 ವಂದೇ ಭಾರತ್ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಬೇಕು ಎಂಬುದು ಬೇಡಿಕೆ. ಇದಕ್ಕೆ ಇಲಾಖೆ ಒಪ್ಪಿಗೆ ನೀಡಿ 2023ರ ನವೆಂಬರ್ನಲ್ಲಿ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿ ನಡೆಯಿತು.

ಆದರೆ ವಂದೇ ಭಾರತ್ ರೈಲು ಬೆಂಗಳೂರು-ಬೆಳಗಾವಿ ನಡುವೆ ಸಂಚಾರ ಆರಂಭಿಸಿಲ್ಲ. ರೈಲು ಸಂಚಾರ ಆರಂಭಿಸಲು ಇರುವ ತಾಂತ್ರಿಕ ತೊಡಕುಗಳು ಏನು? ಎಂದು ಮಾಹಿತಿ ಹಕ್ಕು ಮೂಲಕ ಪ್ರಶ್ನಿಸಲಾಗಿತ್ತು. ಇಲಾಖೆ ಇದಕ್ಕೆ ಉತ್ತರ ನೀಡಿದೆ.
ಆರ್ಟಿಇ ಅರ್ಜಿ; ಬೆಳಗಾವಿ ಮೂಲದ ವ್ಯಕ್ತಿಯೊಬ್ಬರು ಆರ್ಟಿಐ ಮೂಲಕ ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ಇರುವ ತಾಂತ್ರಿಕ ಸಮಸ್ಯೆ ಏನು? ಎಂದು ಕೇಳಿದರು. ಇದಕ್ಕೆ ರೈಲ್ವೆ ಇಲಾಖೆ ಉತ್ತರ ನೀಡಿದೆ. ಶೀಘ್ರದಲ್ಲೇ ರೈಲು ಸಂಚಾರ ಆರಂಭಿಸುವ ದಿನಾಂಕವನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.
ಬೆಂಗಳೂರು-ಬೆಳಗಾವಿ ನಡುವಿನ ಪ್ರಾಯೋಗಿಕ ಸಂಚಾರದ ವೇಳೆ ರೈಲಿನ ನಿರ್ವಹಣೆ ಪ್ರಮುಖವಾಗಿ ರೈಲಿಗೆ ನೀರು ತುಂಬಿಸುವ ವ್ಯವಸ್ಥೆ ಪ್ಲಾಟ್ ಫಾರಂನಲ್ಲಿ ಲಭ್ಯವಿಲ್ಲದಿರುವುದನ್ನು ಗಮನಿಸಲಾಗಿದೆ.
@SWRRLY As per RTI response, it is clear that only two operational constraints were identified during Vande Bharat Trial Run.
— 𝕊𝕙𝕣𝕖𝕪𝕒𝕤 ℝ 𝕄 (@shreyasrm16) January 17, 2024
As per the best of our knowledge we can see that the watering facility is ready and OHE construction at pitline is also completed. pic.twitter.com/Me0sDl7ujo
ಎರಡನೇಯದಾಗಿ ವಂದೇ ಭಾರತ್ ರೈಲು ನಿರ್ವಹಣೆ ಮಾಡಲು ಓವರ್ ಹೆಡ್ ಎಕ್ವಿಪ್ಮೆಂಟ್ (ಒಹೆಚ್ಇ) ಸಂಪರ್ಕ ಹೊಂದಿರುವ ಪಿಟ್ ಲೈನ್ ಇಲ್ಲ ಎಂಬುದನ್ನು ಗಮನಿಸಲಾಗಿದೆ ಎಂದು ರೈಲ್ವೆ ಇಲಾಖೆ ಉತ್ತರದಲ್ಲಿ ವಿವರಣೆ ನೀಡಿದೆ.
ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ಈ ಎರಡು ಕಾರಣಗಳೇ ಅಡಚಣೆ ಆಗಿದೆ. ವಂದೇ ಭಾರತ್ ರೈಲು ಒಂದು ಟ್ರಿಪ್ ಪೂರ್ಣಗೊಳಿಸಿದ ಬಳಿ ನಿರ್ವಹಣೆ ಮಾಡಬೇಕಿದೆ. ಈ ನಿರ್ವಹಣೆಯಲ್ಲಿ ಎಲೆಕ್ಟ್ರಿಕಲ್, ಸ್ವಚ್ಛತೆ ಮುಂತಾದ ಅಂಶಗಳು ಸೇರಿವೆ.
ಬೆಳಗಾವಿ ನಿಲ್ದಾಣದಲ್ಲಿ ಈ ನಿರ್ವಹಣೆ ಮಾಡುವ ವ್ಯವಸ್ಥೆಯ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಆದ್ದರಿಂದ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಲು ಇಲಾಖೆ ದಿನಾಂಕವನ್ನು ನಿಗದಿಗೊಳಿಸಿಲ್ಲ. ಬೆಂಗಳೂರಿನಿಂದ ಹೊರಡುವ ರೈಲು ಧಾರವಾಡ ತನಕ ಮಾತ್ರ ಸಂಚಾರ ನಡೆಸುತ್ತಿದೆ.
ಸದ್ಯದ ಮಾಹಿತಿ ಪ್ರಕಾರ ವಂದೇ ಭಾರತ್ ರೈಲು ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣ (ಮೆಜೆಸ್ಟಿಕ್) ನಿಂದ ರೈಲು ಸಂಖ್ಯೆ 20661 ಮುಂಜಾನೆ 05.45ಕ್ಕೆ ಹೊರಟು ಮಧ್ಯಾಹ್ನ 01.30ಕ್ಕೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ 20662 ಮಧ್ಯಾಹ್ನ 2ಕ್ಕೆ ಬೆಳಗಾವಿಯಿಂದ ಹೊರಟು ರಾತ್ರಿ 10.10ಕ್ಕೆ ಬೆಂಗಳೂರು ನಗರ ನಿಲ್ದಾಣ ತಲುಪಲಿದೆ ಎಂದು ವೇಳಾಪಟ್ಟಿ ತಯಾರು ಮಾಡಲಾಗಿದೆ. ಆದರೆ ರೈಲು ಸಂಚಾರ ಯಾವಾಗ ಎಂಬ ಮಾಹಿತಿಯನ್ನು ಇಲಾಖೆ ನೀಡಿಲ್ಲ.
ಜನಪ್ರತಿನಿಧಿಗಳ, ಪ್ರಯಾಣಿಕರ ಬೇಡಿಕೆಯಂತೆ ಭಾರತೀಯ ರೈಲ್ವೆ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಲು ಒಪ್ಪಿಗೆ ನೀಡಿತ್ತು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ರೈಲನ್ನು ಬೆಳಗಾವಿಗೆ ವಿಸ್ತರಣೆ ಮಾಡಲು ಕೋರಿ ಕೇಂದ್ರ ರೈಲ್ವೆ ಸಚಿವರಿಗೆ ಪತ್ರವನ್ನು ಬರೆದಿದ್ದರು.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications