ಆಲಮಟ್ಟಿ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ ಮೋದಿ-ಎಷ್ಟು ಕೋಟಿ ವೆಚ್ಚ?
ಆಲಮಟ್ಟಿ, ಫೆಬ್ರವರಿ, 25: "ಅಮೃತ ಭಾರತ ನಿಲ್ದಾಣಗಳ" ಯೋಜನೆಯಡಿ ಸೇರ್ಪಡೆಗೊಂಡಿರುವ ಆಲಮಟ್ಟಿ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 26ರಂದು ಚಾಲನೆ ನೀಡಲಿದ್ದಾರೆ. ಹಾಗಾದರೆ ಇದಕ್ಕೆ ತಗಲುವ ವೆಚ್ಚ ಎಷ್ಟು ಕೋಟಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಆನ್ಲೈನ್ ಮೂಲಕ ಏಕಕಾಲದಲ್ಲಿಯೇ ದೇಶಾದ್ಯಂತ ಶಂಕುಸ್ಥಾಪನೆ ಸಮಾರಂಭದಲ್ಲಿ ಆಲಮಟ್ಟಿ ಸಂಸದರು, ಸ್ಥಳೀಯ ಜನಪ್ರತಿನಿಧಿಗಳು, ರೈಲ್ವೆ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈಗಾಗಲೇ ಆಧುನೀಕರಣದ ಕಾಮಗಾರಿಗಳು ಆರಂಭಗೊಂಡಿದೆ. ಪ್ರವಾಸಿ ತಾಣವಾಗಿರುವ ಆಲಮಟ್ಟಿಯ ರೈಲು ನಿಲ್ದಾಣದ ಅಧುನೀಕರಣ ಕಾಮಗಾರಿಯನ್ನು ನೈರುತ್ಯ ರೈಲ್ವೆ ವಲಯ 15.21 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಾರಂಭಿಸಿದೆ. 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಜಿ+ ಅಂತಸ್ತಿನ ರಚನೆಯು ಆಧುನಿಕ ಸೌಲಭ್ಯಗಳ ಕಟ್ಟಡ ನೋಡಲು ಅದ್ಭುತವಾಗಿರಲಿದೆ.

ಫ್ಲಾಟ್ ಫಾರ್ಮ್ ಶೆಲ್ಟರ್ಗಳು (ಚಾವಣಿ), ಪಾರ್ಕಿಂಗ್ ವ್ಯವಸ್ಥೆ ಸುಧಾರಣೆ, ಈಗಿರುವ ಪಾದಚಾರಿ ಮೇಲ್ಸೆತುವೆ 12 ಮೀಟರ್ಗೆ ವಿಸ್ತರಣೆ ಮಾಡಲಾಗುವುದು ಎಂದು ನೈರುತ್ಯ ರೈಲ್ವೆ ವಲಯದ ಹುಬ್ಬಳ್ಳಿ ವಿಭಾಗೀಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಾಣೇಶ ಕವಲಗಿ ತಿಳಿಸಿದರು. ದಟ್ಟಣೆ ತಡೆಗಟ್ಟಲು ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ದ್ವಾರ ನಿರ್ಮಾಣ ಮಾಡಲಾಗುತ್ತದೆ. ವೇಟಿಂಗ್ ಹಾಲ್, ಕ್ಯಾಂಟೀನ್, ರಿಸರ್ವೇಷನ್ ಕೌಂಟರ್, ಹೈಟೆಕ್ ಶೌಚಾಲಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಹೇಳಿದರು.
ರೈಲು ಸೂಚನಾ ಫಲಕಗಳು ಹಾಗೂ ವಿವಿಧ ಕೌಂಟರ್ಗಳು ಸೂಚನಾ ಫಲಕಗಳನ್ನು ಆಧುನಿಕರಣಗೊಳಿಸಲಾಗುತ್ತದೆ. ನಿಲ್ದಾಣವು ದಿವ್ಯಾಂಗ-ಸ್ನೇಹಿಯಾಗಲಿದ್ದು, 2 ಲಿಫ್ಟ್ಗಳು ಮತ್ತು 2 ಎಸ್ಕಲೇಟರ್ಗಳು ಪ್ರಯಾಣಿಕರಿಗೆ ಅನುಕೂಲ ಒದಗಿಸಲಿದೆ. ಪ್ಲಾಟ್ಫಾರ್ಮ್ಗೆ ಸಬ್ ವೇ ಸಂಪರ್ಕದೊಂದಿಗೆ ಎರಡನೇ ಪ್ರವೇಶ ದ್ವಾರ ನಿರ್ಮಾಣಗೊಳ್ಳಲಿದೆ. ಈಗಿರುವ ಫ್ಲಾಟ್ಫಾರ್ಮ್ ವಿಸ್ತರಣೆ ಕಾರ್ಯವೂ ನಡೆಯಲಿದೆ ಎಂದು ಅವರು ಹೇಳಿದರು.
ಆಲಮಟ್ಟಿ ರೈಲು ನಿಲ್ದಾಣದ ಆಧುನೀಕರಣದಿಂದ ಪ್ರಯಾಣಿಕರ ಸ್ನೇಹಿ ನಿಲ್ದಾಣ ಆಗಲಿದೆ. ಎಲ್ಇಡಿ ದೀಪವನ್ನು ನಿಲ್ದಾಣದಾದ್ಯಂತ ಅಳವಡಿಜೆ ಮಾಡಲಾಗುತ್ತದೆ. ಪಾರ್ಕಿಂಗ್ ವ್ಯವಸ್ಥೆ ಸುಧಾರಣೆ ಆಗಲಿದೆ ಎಂದು ತಿಳಿಸಿದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications