ಯಶವಂತಪುರ-ವಿಜಯಪುರ ರೈಲು ವಿಸ್ತರಣೆ; ವೇಳಾಪಟ್ಟಿ

ಬೆಂಗಳೂರು, ಮಾರ್ಚ್ 07: ಬೆಂಗಳೂರು ನಗರದಿಂದ ಉತ್ತರ ಕರ್ನಾಟಕ ಭಾಗಕ್ಕೆ ಸಂಚಾರ ನಡೆಸುವ ಜನರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದೆ. ಯಶವಂತಪುರ-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜೂನ್ ತಿಂಗಳ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಈ ಕುರಿತು ನೈಋತ್ಯ ರೈಲ್ವೆ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಯಶವಂತಪುರ- ವಿಜಯಪುರ ರೈಲುಗಳ ಸಂಚಾರದ ಅವಧಿಯನ್ನು ಮತ್ತೆ ಮೂರು ತಿಂಗಳವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದೆ. ಇದರಿಂದಾಗಿ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

Yeshwanthpur Vijayapura Special Express Train Extend Till June

ನೈಋತ್ಯ ರೈಲ್ವೆಯು ಸದ್ಯ ಇರುವ ಈ ರೈಲುಗಳು ಅಸ್ತಿತ್ವದಲ್ಲಿರುವ ವೇಳಾಪಟ್ಟಿ, ನಿಲುಗಡೆ, ದರ ಮತ್ತು ಬೋಗಿಗಳ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಇಲ್ಲದೇ ರೈಲು ಸೇವೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದೆ.

ಆದೇಶದ ವಿವರ

* ಯಶವಂತಪುರ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 06545) ರೈಲನ್ನು ಜೂನ್ 30, 2024ರ ತನಕ ವಿಸ್ತರಿಸಲಾಗುತ್ತಿದೆ. ಈ ಮೊದಲು ಮಾರ್ಚ್ 3, 2024ರ ತನಕ ರೈಲು ಓಡಿಸಲು ಸೂಚನೆ ನೀಡಲಾಗಿತ್ತು.

*ವಿಜಯಪುರ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 06546) ರೈಲನ್ನು ಜುಲೈ 1, 2024 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಏಪ್ರಿಲ್ 1, 2024 ರವೆರೆಗೆ ಓಡಿಸಲು ಆದೇಶಿಸಲಾಗಿತ್ತು.

ರೈಲುಗಳ ಭಾಗಶಃ ರದ್ದು: ಮಾರ್ಚ್ 7ರಂದು ಮುರುಡೇಶ್ವರ ಮತ್ತು ಸೇನಾಪುರ ಭಾಗದ ನಡುವೆ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಸಲುವಾಗಿ ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ಕುರಿತು ಕೊಂಕಣ ರೈಲ್ವೆ ಮಾಹಿತಿ ನೀಡಿದೆ.

* ಮಾರ್ಚ್ 6ರಂದು ಬೆಂಗಳೂರಿನ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16585 ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲು ಕುಂದಾಪುರ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಕುಂದಾಪುರ ಮತ್ತು ಮುರುಡೇಶ್ವರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.

* ಮಾರ್ಚ್ 7 ರಂದು ರೈಲು ಸಂಖ್ಯೆ 16586 ಮುರುಡೇಶ್ವರ- ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಕುಂದಾಪುರ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಪ್ರಾರಂಭವಾಗಲಿದೆ. ಮುರುಡೇಶ್ವರ ಮತ್ತು ಕುಂದಾಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.

ರೈಲುಗಳ ಮಾರ್ಗ ಬದಲಾವಣೆ: ತಿರುಪತಿ ನಿಲ್ದಾಣದಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ನಿಮಿತ್ತ ಈ ರೈಲುಗಳ ಮಾರ್ಗ ಬದಲಾವಣೆ ಮಾಡಲು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ.

* ಮಾರ್ಚ್ 11 ಮತ್ತು 18, 2024 ರಂದು ಬೆಂಗಳೂರಿನ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 12890 ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಟಾಟಾನಗರ ಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಕಟ್ಪಾಡಿ, ಅರಕ್ಕೋಣಂ ಮತ್ತು ರೇಣಿಗುಂಟ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ತಿರುಪತಿ ನಿಲ್ದಾಣದಲ್ಲಿ ನಿಲುಗಡೆ ತಪ್ಪಿರುತ್ತದೆ.

* ಮಾರ್ಚ್ 12, 14, 19, ಮತ್ತು 21, 2024 ರಂದು ಬೆಂಗಳೂರಿನ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 12836 ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು- ಹಟಿಯಾ ದ್ವಿಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಕಟ್ಪಾಡಿ, ಅರಕ್ಕೋಣಂ ಮತ್ತು ರೇಣಿಗುಂಟ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಚಿತ್ತೂರು ಮತ್ತು ತಿರುಪತಿ ನಿಲ್ದಾಣಗಳಲ್ಲಿ ನಿಲುಗಡೆ ತಪ್ಪಿರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+