ನಂಗೆ ಬೇಕಾ್ರೆ ಹೊಡಿಲಿ, ಸಹಿಸಿಕೊಳ್ತೀನೆ, ಬಲವಂತವಾಗಿ ರೈತರ ಜಮೀನನ್ನು ಕಿತ್ಕೊಳ್ಳೋದಿಲ್ಲ ಎಂದ CM ಡಿಕೆಶಿ
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ, ನನ್ನನ್ನು ಜೈಲಿಗೆ ಕಳುಹಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯಭರಿತವಾಗಿ ಆರೋಪಿಸಿದ್ದಾರೆ.ಡಿ ಕೆ ಶಿವಕುಮಾರ್ ಅವರು ಜೈಲಿಗೆ ಹೋಗುವ ದಿನ ಸನ್ನಿಹಿತವಾಗಿದೆ ಎಂದು ಹೆಚ್ ಡಿ ಕುಮಾರಸ್ವಾಮಿಯವರು ಮಾಧ್ಯಮಗಳ ಮುಂದೆ ಹೇಳಿದ್ದನ್ನು ನೋಡಿದ್ದೇನೆ, ನನಗೇನು ಜೈಲು ಅನುಭವ ಹೊಸದಲ್ಲ, ಅವರ ಇಚ್ಛೆಯಂತೆ ಆಗುವುದಾದರೆ ಆಗಲಿ, ನನ್ನನ್ನು ಜೈಲಿಗೆ ಕಳುಹಿಸಲು ಏನೇನು ಕುತಂತ್ರ ಮಾಡಿದರು ಎಂಬುದನ್ನೆಲ್ಲ ಮುಂದೆ ಹೇಳುತ್ತೇನೆ ಎಂದರು.
Video Published On: Wednesday, Jul 15, 2026, 06:17 [IST]


Click it and Unblock the Notifications