ಮುಂದಿನ ವಾರವೇ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ? ಡಿಕೆಶಿ ಕೊಟ್ರು ಬಿಗ್ ಸುಳಿವು | ಸಚಿವ ಸ್ಥಾನಕ್ಕೆ ಭಾರೀ ಪೈಪೋಟಿ
ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಂದಿನ ವಾರದಲ್ಲಿ ಬಹುತೇಕ ಅಂತಿಮಗೊಳ್ಳುವ ಸಾಧ್ಯತೆ ಇದೆ. ಇದಾಗಲೇ ಸಂಪುಟ ವಿಸ್ತರಣೆಯ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸುಳಿವು ನೀಡಿದ್ದಾರೆ. ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಹಾಗೂ ಮಾಜಿ ಸಚಿವರೂ ಸಹ ತೀವ್ರ ಪೈಪೋಟಿ ನಡೆಸಿದ್ದಾರೆ. ಮಾಜಿ ಸಚಿವರಾದ ದಿನೇಶ್ ಗುಂಡೂರಾವ್, ಹೆಚ್.ಕೆ. ಪಾಟೀಲ್, ಜಮೀರ್ ಅಹ್ಮದ್, ಚಲುವರಾಯಸ್ವಾಮಿ, ಮಧು ಬಂಗಾರಪ್ಪ, ಸಂತೋಷ್ ಲಾಡ್, ಶಿವರಾಜ್ ತಂಗಡಗಿ, ಆರ್.ಬಿ. ತಿಮ್ಮಾಪುರ್, ಹೆಚ್.ಸಿ. ಮಹದೇವಪ್ಪ ಮತ್ತು ಕೆ. ವೆಂಕಟೇಶ್ ನಡುವೆ ಸಚಿವ ಸ್ಥಾನಕ್ಕಾಗಿ ಭಾರಿ ಕಸರತ್ತು ನಡೆಯುತ್ತಿದೆ.
Video Published On: Friday, Jul 03, 2026, 01:20 [IST]


Click it and Unblock the Notifications