ಮಾವಿನ ಹಣ್ಣಿನ ಋತುಮಾನ ಆರಂಭವಾಗಿದೆ. ಮಾವು ಬೆಳೆದಿರುವ ರೈತರು ಹಣ್ಣುಗಳನ್ನು ಮಾರುಕಟ್ಟೆಗೆ ಸಾಗಾಟ ಮಾಡುವುದಲ್ಲಿ ತೊಡಗಿದ್ದಾರೆ. ಮಾವಿನಲ್ಲಿ ಹೂ ಕಚ್ಚಿದ ನಂತರ ತಳಿಗಳನ್ನಾಧರಿಸಿ 5 ತಿಂಗಳಿಗೆ ಕಟಾವಿಗೆ ಸಿದ್ಧವಾಗುತ್ತವೆ.
Mahesh Malnad
ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ವೈಜ್ಞಾನಿಕವಾಗಿ, ಸುರಕ್ಷಿತವಾಗಿ ಮತ್ತು ನೈಸರ್ಗಿಕವಾಗಿ ಮಾವು ಮಾಗಿಸುವ ವಿಧಾನದ ಬಗ್ಗೆ ರೈತರಿಗೆ ಸಲಹೆಗಳನ್ನು ನೀಡಲಾಗಿದೆ
ನೈಸರ್ಗಿಕವಾಗಿ ಮಾಗಿದ ಮಾವಿನ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆಯೂ ಹೆಚ್ಚಿದೆ.ತಳಿಗಳನ್ನಾಧರಿಸಿ ಕೆಲವು ಬೇಗ ಪಕ್ವವಾಗುವ ಹಣ್ಣುಗಳು ಮಾರ್ಚ್ನಲ್ಲಿ ಕಟಾವಿಗೆ ಬರುತ್ತವೆ
ಮಾವಿನ ಹಣ್ಣುಗಳಿಗೆ ಬೇಡಿಕೆ
ಕೊಪ್ಪಳ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಬೆನೆಶಾನ್, ರಸಪುರಿ, ಕೇಸರ್ ಇವುಗಳು ಏಪ್ರಿಲ್, ಮೇ ಸುಮಾರಿಗೆ ಕಟಾವಿಗೆ ಬರುತ್ತದೆ. ತೋತಾಪೂರಿ, ಮಲ್ಲಿಕಾ ಮೇ, ಜೂನ್ ನಂತರ ಕಟಾವಿಗೆ ಸಿದ್ಧವಾಗುತ್ತದೆ.
ಮಾವು ಕಟಾವಿಗೆ ಬಂದಾಗ ಹಳದಿ ಬಣ್ಣಕ್ಕೆ ತಿರುಗುತ್ತವೆ ಮತ್ತು ಭುಜಗಳು ಹಳದಿಯಾಗಿ ಕಾಣುತ್ತವೆ
ಸೋನೆ ಕಡಿಮೆಯಾಗುತ್ತದೆ. 5-6 ಪಕ್ವಗೊಂಡ ಹಣ್ಣುಗಳು ಉದುರಿ ಕೆಳಗೆ ಬೀಳುತ್ತವೆ.
ಪಕ್ವಗೊಂಡ ಕಾಯಿಗಳು
ಚೆನ್ನಾಗಿ ಬಲಿತ ಕಾಯಿಗಳು ಕಟಾವಿನ ನಂತರ 4-5 ದಿನಗಳಲ್ಲಿಯೇ ಹಣ್ಣಾಗುತ್ತವೆ. ವೈಜ್ಞಾನಿಕವಾಗಿ, ಸುರಕ್ಷಿತವಾಗಿ ಮತ್ತು ನೈಸರ್ಗಿಕವಾಗಿ ಹಣ್ಣು ಮಾಗಿಸಿದರೆ ಉತ್ತಮ ಗುಣಮಟ್ಟ ಹಾಗೂ ಮಾರುಕಟ್ಟೆ ದೊರೆಯುತ್ತದೆ
ರೈತರು ಕಾಯಿಗಳನ್ನು ಕಟಾವು ಮಾಡಿದ ನಂತರ ಒಂದೆರೆಡು ಗಂಟೆಗಳ ಕಾಲ ನೆರಳಿನಲ್ಲಿಡಬೇಕು. ಸೋನೆ ಅಂಟಿಕೊಂಡಿದ್ದನ್ನು ಚೆನ್ನಾಗಿ ತೊಳೆದು ನಂತರ ಬಟ್ಟೆಯಿಂದ ಒರೆಸಿ ಪ್ಲಾಸ್ಟಿಕ್ ಕ್ರೇಟ್ಗಳಲ್ಲಿ ಸಂಗ್ರಹಿಸಬೇಕು.
ರೈತರು ಹೀಗೆ ಶೇಖರಿಸಿದ ಕಾಯಿಗಳು 4-5 ದಿನಗಳಲ್ಲಿ ಹಣ್ಣಾಗುತ್ತದೆ. ಮಾವಿನ ಕಾಯಿಗಳ ಜೊತೆಗೆ 4-5 ಬಾಳೆ ಹಣ್ಣುಗಳನ್ನು ಇಟ್ಟರೆ ಬೇಗ ಹಣ್ಣಾಗುವುದು
ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ , ಬೆಂಗಳೂರು ಮಾವಿನ ಹಣ್ಣನ್ನು ಮಾಗಿಸುವ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿದೆ.
ಹಾನಿಕಾರಕ ರಾಸಾಯನಿಕಗಳನ್ನು ಬಳಸಿ ಹಣ್ಣುಗಳನ್ನು ಮಾಗಿಸಬಾರದು. ಇದು ಕಾನೂನು ಬಾಹಿರವಾಗಿದ್ದು ಶಿಕ್ಷಾರ್ಹ ಅಪರಾಧ